Untitled

ಯಾಕೆ ನಿರ್ದಯನಾದೆ(ಯೋ) ಎಲೊ ದೇವನೆ (ಹರಿಯೇ)
ಶ್ರೀಕಾಂತ ಎನ್ನ ಮೇಲೆ ಎಳ್ಳಷ್ಟು ದಯವಿಲ್ಲ||

ಕಂಗೆಟ್ಟು ಕಂಭದಲಿ ಒಡೆದು ಬಳಲಿ ಬಂದು
ಹಿಂಗದೆ ಪ್ರಹ್ಲಾದನ ಅಪ್ಪಿಕೊಂಡೆ
ಮಂಗಳಪದವಿತ್ತು ಮನ್ನಿಸಿದೆ ಅವ ನಿನಗೆ
ಭಂಗಾರವೆಷ್ಟು ಕೊಟ್ಟನು ಪೇಳೊ ಹರಿಯೆ |1|

ಸಿರಿ ದೇವಿಗೆ ಹೇಳದೆ ಸೆರಗು ಸಂವರಿಸದೆ
ಗರುಡನ ಮೇಲೆ ಎರಗಿ ಗಮನವಾಗದೆ
ಭರದಿಂದ ನೀ ಬಂದು ಆತನ ಸಲಹಿದೆ
ಕರಿರಾಜ ಎಷ್ಟು ಕನಕವ ಕೊಟ್ಟನೋ ಹರಿಯೆ |2|

ಅಜಮಿಳನು ಅಣ್ಣನೆ ವಿಭೀಷಣನು ತಮ್ಮನೇ
ನಿಜದಿ ರುಕ್ಮಾಂಗದನು ನಿನ್ನ ಮೊಮ್ಮಗನೆ
ಭಜನೆಗೆ ಅವರೇ ಹಿತರೆ ನಾ ನಿನಗೆ ಅನ್ಯನೇ
ತ್ರಿಜಗಪತಿ ಸಲಹೆನ್ನ ಪುರಂದರವಿಠಲ |3|

Rate this poem: 

Reviews

No reviews yet.