Untitled

ಒಂದೇ ನಾಮವು ಸಾಲದೆ ಶ್ರೀ ಹರಿಯೆಂಬ
ಒಂದೇ ನಾಮವು ಸಾಲದೆ ||ಪ||

ಒಂದೇ ನಾಮವು ಭವಬಂಧನ ಬಿಡಿಸುವುದೆಂದು
ವೇದಂಗಳ ಆನಂದದಿ ಸ್ತುತಿಸುವ ||ಅಪ||

ಉಭಯರಾಯರು ಸೇರಿ ಸಮ್ಮತದಿ ಲೆತ್ತವನಾಡಿ
ಸಭೆಯೊಳು ಧರ್ಮಜ ಸತಿಯ ಸೋಲೆ
ನಭಕೆ ಕೈಯೆತ್ತಿ ದ್ರೌಪದಿ ಕೃಷ್ಣಾ ಎನ್ನಲು
ಇಭರಾಜ ಗಮನೆಗೆ ಅಕ್ಷಯ ವಸ್ತ್ರವನಿತ್ತ |1|

ಹಿಂದೊಬ್ಬ ಋಶಿ ಪುತ್ರನಂದು ದಾಸಿಯ ಕೂಡೆ
ಸಂದೇಹವಿಲ್ಲದೆ ಹಲವು ಕಾಲ
ದಂದುಗದೊಳು ಸಿಲುಕಿ ನಿಂದಂತ್ಯ ಕಾಲದಿ
ಕಂದ ನಾರಗನೆಂದು ಕರೆಯಲಭಯವಿತ್ತ |2|

ಕಾಶಿಯಪುರದೊಳಗೆ ಈಶ ಭಕುತಿಯಿಂದ
ಸಾಸಿರ ನಾಮದ ರಾಮನೆಂಬ
ಶ್ರೀಶನ ನಾಮದ ಉಪದೇಶ ಸತಿಗಿತ್ತ
ವಾಸುದೇವ ಶ್ರೀ ಪುರಂದರ ವಿಠಲನ್ನ |3|

Rate this poem: 

Reviews

No reviews yet.